32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ನ. 30 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೆಕಾಟಿಲ್ ರವರು ಆಗಮಿಸಿ “ಜೀವನದಲ್ಲಿ ಯಾವುದೇ ಸುಖ ದುಃಖ, ನೋವುಗಳನ್ನು ಸಂತೋಷದಿಂದ ಸ್ವೀಕರಿಸಿಕೊಂಡು ಬದುಕೋಣ” ಎಂದು ಮಾತನಾಡಿ, ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು.

ಕಾಂಚಾಲ್ ಪೂಜಾ ಸ್ವ-ಸಹಾಯ ಸಂಘದ ಸದಸ್ಯರು ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮಕ್ಕೆ ಧನಸಹಾಯ ನೀಡಿದರು. ಪೂಜಾ ಸ್ವ-ಸಹಾಯ ಸಂಘ ಸದಸ್ಯೆ ಶ್ರೀಮತಿ ಶೃುತಿರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶ್ರೀಮತಿ ಪ್ರೇಮರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ.ರವರು “ನಮ್ಮ ಪರಿಶ್ರಮ ಯಶಸ್ಸಿನ ಫಲದ ಕಡೆಗೆ ಜೀವನಕ್ಕೆ ಇನ್ನಷ್ಟು ಜೀವವನ್ನು ತುಂಬಬೇಕು” ಎಂದು ಪ್ರಾಸ್ತಾವಿಕ ನುಡಿಯನ್ನು ಆಡಿದರು.
ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಶ್ರೀಮತಿ ಶಾರದಾರವರು ಪ್ರಾರ್ಥನೆ ಹಾಡಿದರು. ಸಂಸ್ಥೆಯ ಕಾರ್ಯಕರ್ತರಾದ ಜೋನ್ಸನ್ ರವರು ಸ್ವಾಗತಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವಿದ್ಯಾನಿಧಿ ಯೋಜನೆಯ ಸಂಯೋಜಕಿ ಶ್ರೀಮತಿ ಜಿನಿ ಪಿ.ಜೆ.ರವರು ಧನ್ಯವಾದವಿತ್ತರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜರವರು ಕಾರ್ಯಕ್ರಮ ನಿರೂಪಿಸಿದರು.

Related posts

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya
error: Content is protected !!