23.3 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಫಾ. ಅಬ್ರಹಾಂ ಪಟ್ಟೇರಿ ಅವರು ತಮ್ಮ ಯಾಜಕಾಭಿಷೇಕದ ರಜತ ಸಂಭ್ರಮದ ಹೊಸ್ತಿಲಲ್ಲಿ ನಿಲ್ಲುತ್ತಿದ್ದು, ಈ ತಿಂಗಳ 28ರಂದು 25 ವರ್ಷಗಳ ಯಶಸ್ವೀ ಯಾಜಕ ಸೇವೆಯನ್ನು ಪೂರ್ಣಗೊಳಿಸಲಿದ್ದಾರೆ. ಉಡುಪಿ ಜಿಲ್ಲೆ ಮುದೂರು, ಬೈಂದೂರು ತಾಲ್ಲೂಕಿನ ಕಲ್ಮಕ್ಕಿ, ಹಾಗೂ ಬೆಳ್ತಂಗಡಿ ಬೆದ್ರಬೆಟ್ಟು ಚರ್ಚುಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಕಳೆದ 14 ವರ್ಷಗಳಿಂದ ಧರ್ಮಪ್ರಾಂತ್ಯದ ಹಣಕಾಸು ಅಧಿಕಾರಿ ಸ್ಥಾನದಲ್ಲಿ ಸೇವೆ ನಿರ್ವಹಿಸುತ್ತಿದ್ದಾರೆ.

ಅಕ್ಷರ ಮತ್ತು ಆಹಾರ ದಾಸೋಹದ ಮೂಲಕ ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸುವ ಹೃದಯವಂತಿಕೆಯ ವ್ಯಕ್ತಿತ್ವವನ್ನು ಫಾ. ಪಟ್ಟೇರಿ ಹೊಂದಿದ್ದಾರೆ ಎಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ವಂದನೀಯ ಫಾ. ಶಾಜಿ ಮಾತ್ಯು ಶುಭಾಶಯ ಸಂದೇಶದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಟ್ರಸ್ಟಿಗಳಾದ ಶಿಬು, ಜೋಬಿನ್, ಅಲೆಕ್ಸ್, ಅಲ್ಬಿನ್, ಲೆಕ್ಕಪರಿಶೋಧಕ ಸುರೇಶ್, ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ., ವಂದನೀಯ ಭಗಿನಿ ಸಿಸ್ಟರ್ ಲಿಸ್ ಮಾತ್ಯು, ಮತ್ತು ರೊಯ್ ಉಪಸ್ಥಿತರಿದ್ದರು.

Related posts

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!