April 2, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಫಾ. ಅಬ್ರಹಾಂ ಪಟ್ಟೇರಿ ಅವರು ತಮ್ಮ ಯಾಜಕಾಭಿಷೇಕದ ರಜತ ಸಂಭ್ರಮದ ಹೊಸ್ತಿಲಲ್ಲಿ ನಿಲ್ಲುತ್ತಿದ್ದು, ಈ ತಿಂಗಳ 28ರಂದು 25 ವರ್ಷಗಳ ಯಶಸ್ವೀ ಯಾಜಕ ಸೇವೆಯನ್ನು ಪೂರ್ಣಗೊಳಿಸಲಿದ್ದಾರೆ. ಉಡುಪಿ ಜಿಲ್ಲೆ ಮುದೂರು, ಬೈಂದೂರು ತಾಲ್ಲೂಕಿನ ಕಲ್ಮಕ್ಕಿ, ಹಾಗೂ ಬೆಳ್ತಂಗಡಿ ಬೆದ್ರಬೆಟ್ಟು ಚರ್ಚುಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಕಳೆದ 14 ವರ್ಷಗಳಿಂದ ಧರ್ಮಪ್ರಾಂತ್ಯದ ಹಣಕಾಸು ಅಧಿಕಾರಿ ಸ್ಥಾನದಲ್ಲಿ ಸೇವೆ ನಿರ್ವಹಿಸುತ್ತಿದ್ದಾರೆ.

ಅಕ್ಷರ ಮತ್ತು ಆಹಾರ ದಾಸೋಹದ ಮೂಲಕ ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸುವ ಹೃದಯವಂತಿಕೆಯ ವ್ಯಕ್ತಿತ್ವವನ್ನು ಫಾ. ಪಟ್ಟೇರಿ ಹೊಂದಿದ್ದಾರೆ ಎಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ವಂದನೀಯ ಫಾ. ಶಾಜಿ ಮಾತ್ಯು ಶುಭಾಶಯ ಸಂದೇಶದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಟ್ರಸ್ಟಿಗಳಾದ ಶಿಬು, ಜೋಬಿನ್, ಅಲೆಕ್ಸ್, ಅಲ್ಬಿನ್, ಲೆಕ್ಕಪರಿಶೋಧಕ ಸುರೇಶ್, ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ., ವಂದನೀಯ ಭಗಿನಿ ಸಿಸ್ಟರ್ ಲಿಸ್ ಮಾತ್ಯು, ಮತ್ತು ರೊಯ್ ಉಪಸ್ಥಿತರಿದ್ದರು.

Related posts

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
error: Content is protected !!