23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಫಾ. ಅಬ್ರಹಾಂ ಪಟ್ಟೇರಿ ಅವರು ತಮ್ಮ ಯಾಜಕಾಭಿಷೇಕದ ರಜತ ಸಂಭ್ರಮದ ಹೊಸ್ತಿಲಲ್ಲಿ ನಿಲ್ಲುತ್ತಿದ್ದು, ಈ ತಿಂಗಳ 28ರಂದು 25 ವರ್ಷಗಳ ಯಶಸ್ವೀ ಯಾಜಕ ಸೇವೆಯನ್ನು ಪೂರ್ಣಗೊಳಿಸಲಿದ್ದಾರೆ. ಉಡುಪಿ ಜಿಲ್ಲೆ ಮುದೂರು, ಬೈಂದೂರು ತಾಲ್ಲೂಕಿನ ಕಲ್ಮಕ್ಕಿ, ಹಾಗೂ ಬೆಳ್ತಂಗಡಿ ಬೆದ್ರಬೆಟ್ಟು ಚರ್ಚುಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಕಳೆದ 14 ವರ್ಷಗಳಿಂದ ಧರ್ಮಪ್ರಾಂತ್ಯದ ಹಣಕಾಸು ಅಧಿಕಾರಿ ಸ್ಥಾನದಲ್ಲಿ ಸೇವೆ ನಿರ್ವಹಿಸುತ್ತಿದ್ದಾರೆ.

ಅಕ್ಷರ ಮತ್ತು ಆಹಾರ ದಾಸೋಹದ ಮೂಲಕ ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸುವ ಹೃದಯವಂತಿಕೆಯ ವ್ಯಕ್ತಿತ್ವವನ್ನು ಫಾ. ಪಟ್ಟೇರಿ ಹೊಂದಿದ್ದಾರೆ ಎಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ವಂದನೀಯ ಫಾ. ಶಾಜಿ ಮಾತ್ಯು ಶುಭಾಶಯ ಸಂದೇಶದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಟ್ರಸ್ಟಿಗಳಾದ ಶಿಬು, ಜೋಬಿನ್, ಅಲೆಕ್ಸ್, ಅಲ್ಬಿನ್, ಲೆಕ್ಕಪರಿಶೋಧಕ ಸುರೇಶ್, ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ., ವಂದನೀಯ ಭಗಿನಿ ಸಿಸ್ಟರ್ ಲಿಸ್ ಮಾತ್ಯು, ಮತ್ತು ರೊಯ್ ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya
error: Content is protected !!