25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಆಯೋಜಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ ಮಾಡಲಾಯಿತು. ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ ಹಾಗೂ ಟ್ರಸ್ಟ್ ಸದಸ್ಯರು ಮೊತ್ತ ಸ್ವೀಕರಿಸಿದರು.

ಕಳೆದ ಒಂದು ವಾರದ ಹಿಂದೆ ಲತೇಶ್ ಪೆರಾಜೆ ಹಾಗೂ ಪ್ರಣಾಮ್ ಶೆಟ್ಟಿ ನೇತೃತ್ವದಲ್ಲಿ ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ನಿಶಾಂತ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಮಾರು ರೂ 61 ಸಾವಿರ ಮೊತ್ತ ಉಳಿಕೆಯಾಗಿತ್ತು. ಅದರಲ್ಲಿ ರೂ.31 ಸಾವಿರ ಬಳಂಜ ಶಾಲೆಗೆ ಹಾಗೂ ಉಳಿಕೆ ಮೊತ್ತವನ್ನು ಅಶಕ್ತ ಕುಟುಂಬಗಳಿಗೆ ಹಸ್ತಾಂತರಿಸಿ ಗ್ರಾಮಸ್ಥರ ಪ್ರೀತಿಗೆ ಪಾತ್ರರಾದರು‌.

ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಮುಖ್ಯೋಪಾಧ್ಯರು, ಶಿಕ್ಷಕರು, ಅಟ್ಲಾಜೆ ಕ್ರಿಕೆಟರ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!