23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿ ಹಾಗೂ ಎಸ್ ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಎಸ್ ಎಸ್ ಎಫ್ ಇಂಡಿಯಾ ವತಿಯಿಂದ ಗೋವಾ ರಾಜ್ಯದ ವೆರ್ನದಲ್ಲಿ ನ . 29, 30, ಮತ್ತು ಡಿ. 1 ರಂದು ನಡೆಸಿದ “ರಾಷ್ಟ್ರಮಟ್ಟದ ಸಾಹಿತ್ಯೋತ್ಸವ -24 ” ಇದರ ಜೂನಿಯರ್ ವಿಭಾಗದ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಸುಮಾರು 26 ರಾಜ್ಯಗಳಿಂದ ಭಾಗವಹಿಸಿದ್ದ ಸ್ಪರ್ದಾಳುಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ, ಶಾಲೆಗೆ ಹಾಗೂ ಹೆತ್ತವರಿಗೆ ಗೌರವವನ್ನು ತಂದುಕೊಟ್ಟಿದ್ದಾರೆ. ಉವೈಸ್ ಇವರು 2023-24ನೇ ಸಾಲಿನಲ್ಲಿ ಆಂಧ್ರಪ್ರದೇಶದ ಗುಂಟಕಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದು ಸತತ ಎರಡನೇ ಬಾರಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಉವೈಸ್ ಸ್ಟಾರ್ ಲೈನ್ ವಿದ್ಯಾಸಂಸ್ಥೆಯ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸೈಯದ್ ಮುಹಮ್ಮದ್ ಅಯ್ಯುಬ್ ಹಾಗೂ ಶ್ರೀಮತಿ ನೂರ್ ಶಬ ದಂಪತಿಯ ಪುತ್ರರಾಗಿರುತ್ತಾರೆ.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya
error: Content is protected !!