23.5 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ.

ನಾಳೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ.
ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ. ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಯುಸಿ ತನಕ
ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದ್ದಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya
error: Content is protected !!