September 6, 2026
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ.

ನಾಳೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ.
ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ. ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಯುಸಿ ತನಕ
ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದ್ದಾರೆ.

Related posts

ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Suddi Udaya

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya
error: Content is protected !!