July 23, 2026
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್‌ ಘೋಷಿಸಿದ್ದಾರೆ.

ನಾಳೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ.
ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ. ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಿಯುಸಿ ತನಕ
ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಜೆ ಘೋಷಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!