25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

ಬೆಳಾಲು: ಇಲ್ಲಿಯ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಡಿ.2ರಂದು ಸಂಜೆ ನಡೆದಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38ವ) ರವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿದೆ.

ಮೂವರು ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ, ಅವರನ್ನು ರಕ್ಷಿಸುವ ವೇಳೆ ಜತೆಗಿದ್ದವರು ರಕ್ಷಿಸಲು ಹೋದಾಗ ಅವರು ಅಪಾಯದಲ್ಲಿದ್ದನ್ನು ಕಂಡು ಅವರನ್ನು ಮತ್ತೊಬ್ಬ ರಕ್ಷಿಸಿದ್ದಾರೆ ಎನ್ನಲಾಗಿದೆ. ನದಿ ಪ್ರದೇಶ ಆಳವಾಗಿರುವುದರಿಂದ ಮುಳುಗು ತಜ್ಞರ ಅನಿವಾರ್ಯವಿದೆ

Related posts

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya
error: Content is protected !!