September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

ಬಂದಾರು : ಡಿ.2.ರಂದು ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ನಡೆಯಿತು.

ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಅಧ್ಯಕ್ಷತೆ ವಹಿಸಿದರು.
ಬಾಲಕೃಷ್ಣ ಪೂಜಾರಿ ಬಜಗುತ್ತು ಕೊಯ್ಯೂರು ಮಾತನಾಡುತ್ತಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ವಿವಿಧ ವಿಭಾಗದ ಸಮಿತಿ ಪದಾಧಿಕಾರಿಗಳು, ಸ್ವಯಂ ಸೇವಕರು ಮನಃಪೂರ್ವಕವಾಗಿ ತೊಡಗಿಸಿಕೊಂಡು ತಮ್ಮ ಕರ್ತವ್ಯವನ್ನು ಸೇವೆ ಎಂದು ತಿಳಿದು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.


ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಅವರು ಮಾರ್ಗದರ್ಶನ ನೀಡಿ ಅರಿಕೋಡಿ ಶ್ರೀ ಕ್ಷೇತ್ರದ ಮೂಲಕ ಬ್ರಹ್ಮ ಕಲಶೋತ್ಸವ ಪುಣ್ಯ ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ಹೇಳಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ, ಅಭಿವೃದ್ಧಿ ಸಮಿತಿ, ಬ್ರಹ್ಮ ಕಲಶೋತ್ಸವ ಸಮಿತಿ, ಮಹಿಳಾ ಸಮಿತಿ ಹಾಗೂ ವಿವಿಧ ಸಮಿತಿ ಸಂಚಾಲಕ-ಸಹಸಂಚಾಲಕರು ಉಪಸ್ಥಿತರಿದ್ದರು.


ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅನುವಂಶಿಕ ಮೊಕ್ತೇಸರು ಕುಕ್ಕುಪ್ಪ ಗೌಡ, ತಿಮ್ಮಪ್ಪ ಗೌಡ ಸೋಣಕುಮೇರು ,ಅಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!