23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ನ. 30 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೆಕಾಟಿಲ್ ರವರು ಆಗಮಿಸಿ “ಜೀವನದಲ್ಲಿ ಯಾವುದೇ ಸುಖ ದುಃಖ, ನೋವುಗಳನ್ನು ಸಂತೋಷದಿಂದ ಸ್ವೀಕರಿಸಿಕೊಂಡು ಬದುಕೋಣ” ಎಂದು ಮಾತನಾಡಿ, ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು.

ಕಾಂಚಾಲ್ ಪೂಜಾ ಸ್ವ-ಸಹಾಯ ಸಂಘದ ಸದಸ್ಯರು ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮಕ್ಕೆ ಧನಸಹಾಯ ನೀಡಿದರು. ಪೂಜಾ ಸ್ವ-ಸಹಾಯ ಸಂಘ ಸದಸ್ಯೆ ಶ್ರೀಮತಿ ಶೃುತಿರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಶ್ರೀಮತಿ ಪ್ರೇಮರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ.ರವರು “ನಮ್ಮ ಪರಿಶ್ರಮ ಯಶಸ್ಸಿನ ಫಲದ ಕಡೆಗೆ ಜೀವನಕ್ಕೆ ಇನ್ನಷ್ಟು ಜೀವವನ್ನು ತುಂಬಬೇಕು” ಎಂದು ಪ್ರಾಸ್ತಾವಿಕ ನುಡಿಯನ್ನು ಆಡಿದರು.
ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಶ್ರೀಮತಿ ಶಾರದಾರವರು ಪ್ರಾರ್ಥನೆ ಹಾಡಿದರು. ಸಂಸ್ಥೆಯ ಕಾರ್ಯಕರ್ತರಾದ ಜೋನ್ಸನ್ ರವರು ಸ್ವಾಗತಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವಿದ್ಯಾನಿಧಿ ಯೋಜನೆಯ ಸಂಯೋಜಕಿ ಶ್ರೀಮತಿ ಜಿನಿ ಪಿ.ಜೆ.ರವರು ಧನ್ಯವಾದವಿತ್ತರು. ಕಾರ್ಯಕರ್ತರಾದ ಮಾರ್ಕ್ ಡಿ ಸೋಜರವರು ಕಾರ್ಯಕ್ರಮ ನಿರೂಪಿಸಿದರು.

Related posts

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya
error: Content is protected !!