22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಫಾ. ಅಬ್ರಹಾಂ ಪಟ್ಟೇರಿ ಅವರು ತಮ್ಮ ಯಾಜಕಾಭಿಷೇಕದ ರಜತ ಸಂಭ್ರಮದ ಹೊಸ್ತಿಲಲ್ಲಿ ನಿಲ್ಲುತ್ತಿದ್ದು, ಈ ತಿಂಗಳ 28ರಂದು 25 ವರ್ಷಗಳ ಯಶಸ್ವೀ ಯಾಜಕ ಸೇವೆಯನ್ನು ಪೂರ್ಣಗೊಳಿಸಲಿದ್ದಾರೆ. ಉಡುಪಿ ಜಿಲ್ಲೆ ಮುದೂರು, ಬೈಂದೂರು ತಾಲ್ಲೂಕಿನ ಕಲ್ಮಕ್ಕಿ, ಹಾಗೂ ಬೆಳ್ತಂಗಡಿ ಬೆದ್ರಬೆಟ್ಟು ಚರ್ಚುಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಕಳೆದ 14 ವರ್ಷಗಳಿಂದ ಧರ್ಮಪ್ರಾಂತ್ಯದ ಹಣಕಾಸು ಅಧಿಕಾರಿ ಸ್ಥಾನದಲ್ಲಿ ಸೇವೆ ನಿರ್ವಹಿಸುತ್ತಿದ್ದಾರೆ.

ಅಕ್ಷರ ಮತ್ತು ಆಹಾರ ದಾಸೋಹದ ಮೂಲಕ ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸುವ ಹೃದಯವಂತಿಕೆಯ ವ್ಯಕ್ತಿತ್ವವನ್ನು ಫಾ. ಪಟ್ಟೇರಿ ಹೊಂದಿದ್ದಾರೆ ಎಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ವಂದನೀಯ ಫಾ. ಶಾಜಿ ಮಾತ್ಯು ಶುಭಾಶಯ ಸಂದೇಶದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಟ್ರಸ್ಟಿಗಳಾದ ಶಿಬು, ಜೋಬಿನ್, ಅಲೆಕ್ಸ್, ಅಲ್ಬಿನ್, ಲೆಕ್ಕಪರಿಶೋಧಕ ಸುರೇಶ್, ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ., ವಂದನೀಯ ಭಗಿನಿ ಸಿಸ್ಟರ್ ಲಿಸ್ ಮಾತ್ಯು, ಮತ್ತು ರೊಯ್ ಉಪಸ್ಥಿತರಿದ್ದರು.

Related posts

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya
error: Content is protected !!