July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಫಾ. ಅಬ್ರಹಾಂ ಪಟ್ಟೇರಿ ಅವರು ತಮ್ಮ ಯಾಜಕಾಭಿಷೇಕದ ರಜತ ಸಂಭ್ರಮದ ಹೊಸ್ತಿಲಲ್ಲಿ ನಿಲ್ಲುತ್ತಿದ್ದು, ಈ ತಿಂಗಳ 28ರಂದು 25 ವರ್ಷಗಳ ಯಶಸ್ವೀ ಯಾಜಕ ಸೇವೆಯನ್ನು ಪೂರ್ಣಗೊಳಿಸಲಿದ್ದಾರೆ. ಉಡುಪಿ ಜಿಲ್ಲೆ ಮುದೂರು, ಬೈಂದೂರು ತಾಲ್ಲೂಕಿನ ಕಲ್ಮಕ್ಕಿ, ಹಾಗೂ ಬೆಳ್ತಂಗಡಿ ಬೆದ್ರಬೆಟ್ಟು ಚರ್ಚುಗಳಲ್ಲಿ ಸೇವೆ ಸಲ್ಲಿಸಿರುವ ಅವರು, ಕಳೆದ 14 ವರ್ಷಗಳಿಂದ ಧರ್ಮಪ್ರಾಂತ್ಯದ ಹಣಕಾಸು ಅಧಿಕಾರಿ ಸ್ಥಾನದಲ್ಲಿ ಸೇವೆ ನಿರ್ವಹಿಸುತ್ತಿದ್ದಾರೆ.

ಅಕ್ಷರ ಮತ್ತು ಆಹಾರ ದಾಸೋಹದ ಮೂಲಕ ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸುವ ಹೃದಯವಂತಿಕೆಯ ವ್ಯಕ್ತಿತ್ವವನ್ನು ಫಾ. ಪಟ್ಟೇರಿ ಹೊಂದಿದ್ದಾರೆ ಎಂದು ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚಿನ ವಂದನೀಯ ಫಾ. ಶಾಜಿ ಮಾತ್ಯು ಶುಭಾಶಯ ಸಂದೇಶದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಟ್ರಸ್ಟಿಗಳಾದ ಶಿಬು, ಜೋಬಿನ್, ಅಲೆಕ್ಸ್, ಅಲ್ಬಿನ್, ಲೆಕ್ಕಪರಿಶೋಧಕ ಸುರೇಶ್, ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ., ವಂದನೀಯ ಭಗಿನಿ ಸಿಸ್ಟರ್ ಲಿಸ್ ಮಾತ್ಯು, ಮತ್ತು ರೊಯ್ ಉಪಸ್ಥಿತರಿದ್ದರು.

Related posts

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya
error: Content is protected !!