23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿಯ ವಿದ್ಯಾರ್ಥಿಗಳಿಗೆ ಒದಗಿಸಿದ ಕಂಪ್ಯೂಟರ್ ಸ್ಮಾರ್ಟ್ ತರಗತಿ ವ್ಯವಸ್ಥೆಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಇವರು ವಹಿಸಿ ಗುಣಮಟ್ಟದ ಶಿಕ್ಷಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ದೊರಕಿಸುವಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಹಕಾರ ಅತ್ಯಂತ ಗಮನಾರ್ಹವಾದುದು ಎಂದರು.

ಸಮಾರಂಭದ ಉದ್ಘಾಟನೆಯನ್ನು ಪ್ರೊಜೆಕ್ಟರ್ ಸ್ಲೈಡ್ ಮೂಲಕ ನೆರವೇರಿಸಿದ ದಕ್ಷಿಣ ಕನ್ನಡ ಜಿಲ್ಲಾ ಗವರ್ನರ್ ಲಯನ್ ಬಿ ಎಂ ಭಾರತಿ(PMJF) ಇವರು ವಿದ್ಯಾರ್ಥಿಗಳು ಕಂಪ್ಯೂಟರ್ ತರಗತಿಯ ಸಂಪೂರ್ಣ ಪ್ರಯೋಜನವನ್ನು ಪಡೆದು ಸ್ಪರ್ಧಾತ್ಮಕವಾಗಿ ಬೆಳೆಯಬೇಕು. ತಾವು ಕೂಡ ತಾಂತ್ರಿಕ ಕೌಶಲಗಳಿಂದ ಇತರರಿಗೆ ಸರಿಸಾಟಿಯಾಗಿ ತಂತ್ರಜ್ಞಾನದಲ್ಲಿ ಸ್ಪರ್ಧೆ ನೀಡಬೇಕು ಎಂದರು.

ಕೊಡುಗೆ ನೀಡಿದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರು ಮತ್ತು ಸದಸ್ಯರ ಕಾರ್ಯವನ್ನು ಶ್ಲಾಘಿಸಿದರು.
ಸಮಾರಂಭದಲ್ಲಿ ಜಿಲ್ಲಾ ಕ್ಯಾಬಿನೆಟ್ ಕಾರ್ಯದರ್ಶಿಯವರಾದ ಲಯನ್ ಗೀತಾ ಎಸ್ ರಾವ್, ಚೀಫ್ ರೀಜನಲ್ ಅಧ್ಯಕ್ಷ ಲಯನ್ ವೆಂಕಟೇಶ್ ಹೆಬ್ಬಾರ್, ವಿಭಾಗೀಯ ಅಧ್ಯಕ್ಷ ಲಯನ್ ಉಮೇಶ್ ಶೆಟ್ಟಿ, ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಲಯನ್ ದೇವದಾಸ್, ಕಾರ್ಯದರ್ಶಿ ಲಯನ್ ಕಿರಣ್ ಶೆಟ್ಟಿ, ಪೂರ್ವ ಅಧ್ಯಕ್ಷ ಲಯನ್ ರಾಘವೇಂದ್ರ ಶೆಟ್ಟಿ, ಬಳಂಜ ಪೂರ್ವ ವಲಯ ಅಧ್ಯಕ್ಷ ಲಯನ್ ಪ್ರತೀಕ್ಷ ಹೆಬ್ಬಾರ್ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆಎಂ ರವರು ಉಪಸ್ಥಿತರಿದ್ದರು.

ಪ್ರಾಂಶುಪಾಲರು ಸ್ವಾಗತಿಸಿ, ಜೀವಶಾಸ್ತ್ರ ಉಪನ್ಯಾಸಕ ಪ್ರಶಾಂತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya
error: Content is protected !!