23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಪಾಲಾನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್ ಇವರ ನೇತೃತ್ವದಲ್ಲಿ ಚರ್ಚ್‌ನ ಎಲ್ಲಾ ಸಂಘಟನೆಗಳು ಹಾಗೂ ಮೈಕಲ್ ಡಿಸೋಜ ಪುತ್ತೂರು, ಸಿಒಡಿಪಿ ಹ್ಯುಮಾನಿಟಿ ಬೆಳ್ಮಣ್ ಹಾಗೂ ಊರ ಪರವೂರ ದಾನಿಗಳ ನೆರವಿನೊಂದಿಗೆ ಅಶಕ್ತ ಕುಟುಂಬಕ್ಕೆ ನಿರ್ಮಾಣಗೊಂಡ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಇದು 5 ನೇ ಯೋಜನೆಯಾಗಿದ್ದು ಇದುವರೆಗೆ ಸುಮಾರು 37 ಲಕ್ಷ ವೆಚ್ಚದಲ್ಲಿ 2021 ರಿಂದ ಇಂದಿನವರೆಗೆ ಮೂರು ಮನೆಗಳ ನವೀಕರಣ ಹಾಗೂ 2 ಹೊಸ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.
ಹಸ್ತಾಂತರ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಹ್ಯುಮಾನಿಟಿ ಟ್ರಸ್ಟ್ ಬೆಳ್ಮಣ್ ಇದರ ಸ್ಥಾಪಕ ರೋಶನ್ ಡಿಸೋಜ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾ ಕಿರಣ್ ಕಾರಂತ್ ಹಾಜರಿದ್ದು ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಅಂತೋನಿ ಚರ್ಚಿನ ಧರ್ಮ್ ಗುರು ವಂದನೀಯ ಅಬೆಲ್ ಲೋಬೋ ವಹಿಸಿದ್ದರು.
ಅನುಗ್ರಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ವಂದನೀಯ ವಿಜಯ್ ಲೋಬೋ, ದಯಾ ವಿಶೇಷ ಶಾಲೆಯ ಧರ್ಮಗುರು ವಂದನೀಯ ವಿನೋದ್ ಮಸ್ಕರೆನಸ್, ಕಾಪುಚಿನ್ ಅಶ್ರಮ ದಯಾಳ್ ಭಾಗ್ ಧರ್ಮಗುರು ವಂದನೀಯ ಎಡ್ಡಿನ್ ಲೋಬೋ, ಎಸ್.ಎಮ್.ಐ ಕಾನ್ವೆಂಟ್ ಸುಪೀರಿಯರ್ ಧರ್ಮ ಭಗಿನಿ ನ್ಯಾನ್ಸಿ ಡಯಾಸ್, ಫಲಾನುಭವಿ ರೋಜಿ ಪಾಯ್ಸ್ ಕುಟುಂಬಸ್ಥರು ಹಾಜರಿದ್ದರು.

ಪಾಲಾನಾ ಮಂಡಳಿ ಕಾರ್ಯದರ್ಶಿ ಲಿಗೋರಿ ವಾಸ್ ಸ್ವಾಗತಿಸಿದರು. ಪಾಲಾನಾ ಮಂಡಳಿ ಸಂಯೋಜಕಿ ಲವೀನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ ದನ್ಯಾವಾದವಿತ್ತರು. ಸಂತ ಲಾರೆನ್ಸ್ ವಾಳೆಯ ಗುರಿಕಾರರು ಮನೆ ಆಶೀರ್ವಚನದ ಪ್ರಾರ್ಥನೆ ಮಾಡಲು ಧರ್ಮ ಗುರುಗಳೊಂದಿಗೆ ಜತೆಗೂಡಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಕ್ಯಾನ್ ಫಿನ್ ಹೋಂಮ್ಸ್ ವತಿಯಿಂದ ಕೊಡುಗೆ

Suddi Udaya
error: Content is protected !!