25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿ.02 ರಂದು ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ ಸುಮಾರು 5ರಿಂದ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದು ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್ ಹಾಗೂ ಅಗ್ನಿಶಾಮಕದಳದವರು ರಾತ್ರಿ11ರ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ.

ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.ಇಂದು ( ಡಿ.03) 11 ಗಂಟೆಗೆ ಬೆಳಾಲು ಹಾಲು ಸೊಸೈಟಿ ಹತ್ತಿರದ ಮೈದಾನದಲ್ಲಿ ಪ್ರಸಾದ್ ಪಾರ್ಥಿವ ಶರೀರ ಇರಿಸಲಾಗಿದ್ದು ಸಾರ್ವಜನಿಕರ ದರ್ಶನಕ್ಕೆ ಮೂಲ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ ಪ್ರಸಾದ್ ಪಾರ್ಥಿವ ಶರೀರ ಸ್ಥಳಾಂತರಗೊಳ್ಳಲಿದ್ದು ಬೆಳಾಲು ಕೂಡಿಗೆ ಸ್ವ ಗೃಹಕ್ಕೆ ತರಲಾಗುವುದು .ನಂತರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನಡೆಯಲಿದೆ.

Related posts

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಬಳ್ಳಮಂಜದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya
error: Content is protected !!