September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿ.02 ರಂದು ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ ಸುಮಾರು 5ರಿಂದ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದು ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್ ಹಾಗೂ ಅಗ್ನಿಶಾಮಕದಳದವರು ರಾತ್ರಿ11ರ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ.

ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.ಇಂದು ( ಡಿ.03) 11 ಗಂಟೆಗೆ ಬೆಳಾಲು ಹಾಲು ಸೊಸೈಟಿ ಹತ್ತಿರದ ಮೈದಾನದಲ್ಲಿ ಪ್ರಸಾದ್ ಪಾರ್ಥಿವ ಶರೀರ ಇರಿಸಲಾಗಿದ್ದು ಸಾರ್ವಜನಿಕರ ದರ್ಶನಕ್ಕೆ ಮೂಲ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ ಪ್ರಸಾದ್ ಪಾರ್ಥಿವ ಶರೀರ ಸ್ಥಳಾಂತರಗೊಳ್ಳಲಿದ್ದು ಬೆಳಾಲು ಕೂಡಿಗೆ ಸ್ವ ಗೃಹಕ್ಕೆ ತರಲಾಗುವುದು .ನಂತರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನಡೆಯಲಿದೆ.

Related posts

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya
error: Content is protected !!