25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

ಹೊಸಂಗಡಿ: ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ತುಮರಿ ಕಲಾತಂಡದ ನೂತನ ಮಕ್ಕಳ ನಾಟಕ ‘ ‘ಇರುವೆ ಪುರಾಣ’ವು ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಇವರ ಸಹಕಾರ ಹಾಗೂ ಮಾರ್ಗದರ್ಶನದಿಂದ ಪ್ರದರ್ಶನಗೊಂಡಿತು.

ಕಿನ್ನರ ಮೇಳ ರಂಗ ತಂಡವು ಪ್ರತಿ ವರ್ಷ ವಿನೂತನ ಕಥಾವಸ್ತುವನ್ನು ಒಳಗೊಂಡ ನಾಟಕಗಳನ್ನು ರಚಿಸಿ ಪ್ರದರ್ಶಿಸುತ್ತಿದೆ. ಮಾತ್ರವಲ್ಲದೆ ಸಮಾಜಕ್ಕೆ ಉತ್ತಮ  ಮೌಲ್ಯಯುತ ಸಂದೇಶವನ್ನು ನೀಡುತ್ತಿದೆ. ‘ ಇರುವೆ ಪುರಾಣ ‘ ನಾಟಕವು ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ ಎಂಬ ಸಂದೇಶವನ್ನು ನೀಡುವ ನೂತನ ಕಲಾಕುಸುಮವಾಗಿದೆ.


ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ಮನರಂಜನೆ ಹಾಗೂ ಒಳ್ಳೆಯ ಸಂದೇಶವು ಈ ನಾಟಕದ ಮೂಲಕ ದೊರೆಯಿತು. ಶಾಲೆಯ ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ ನಾಟಕ ಪ್ರದರ್ಶನಕ್ಕೆ ಬೇಕಾದ ಸರ್ವ ರೀತಿಯ ಸಹಕಾರವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya
error: Content is protected !!