April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

ಇಂದಬೆಟ್ಟು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.) ಇಂದಬೆಟ್ಟು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ವಸಂತ ಗೌಡ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ನವೀನ್ ಜೈನ್ ಪಾದೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು(ಡಿ.3) ಸಂಘದ ಕಛೇರಿಯಲ್ಲಿ ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ.ವಿ ಇವರು ನೂತನ ಅಧ್ಯಕ್ಷರ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಬಿಜೆಪಿ ಬೆಂಬಲಿತ ಶ್ರೀಮತಿ ಕುಸುಮಾವತಿ ಶಶಿಧರ ಗೌಡ, ಶ್ರೀಮತಿ ಹೇಮಾವತಿ ವೆಂಕಪ್ಪ ಮೂಲ್ಯ, ಶ್ರೀಮತಿ ಲೀಲಾ ಸನತ್ ಆಚಾರ್ಯ, ಶ್ರೀಮತಿ ಸುಮಿತ್ರಾ ಕೆ, ಶ್ರೀಮತಿ ಸೌಮ್ಯಾ ಸುರೇಂದ್ರ ಕುಕ್ಕಿಮಾರು, ಶ್ರೀಮತಿ ಸುಮತಿ ಶೇಖರಗೌಡ ಕುದುರು, ಶ್ರೀಮತಿ ಅಕ್ಕಮ್ಮ ಶ್ರೀಧರ ಮುಗೇರ ನೇತ್ರಾವತಿ ನಗರ, ಶ್ರೀಮತಿ ಪ್ರೇಮಾ ವಿದ್ಯಾನಂದ ಗುಡಿಗಾರ್, ಶ್ರೀಮತಿ ವಿನುತಾ ಡಿ. ಸುದೀಶ್ ಕುಮಾರ್, ಕಾಂಗ್ರೆಸ್ ಬೆಂಬಲಿತರಾದ ಶ್ರೀಮತಿ ಆಶಾ ಗಣೇಶ್, ಶ್ರೀಮತಿ ಎಲ್ಸಿ ಉಪಸ್ಥಿತರಿದ್ದರು.

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya
error: Content is protected !!