30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

ಬೆಳ್ತಂಗಡಿ : ಶಾರದಾ ಕುಟುಂಬ ವಿಕಸನ ಮಂಡಳಿ, ಕೆ.ಸಿ.ಇ ಸಂಸ್ಥೆ ಪುತ್ತೂರು ಜಿಲ್ಲಾ ಮಾತೃ ಸಮನ್ವಯ ಸಮಿತಿ ದ. ಕ
ತಾಲೂಕು ಕಾರ್ಯ ನಿರ್ದೇಶಕರ ಸಂಯುಕ್ತ ಘಟಕ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಸಂಚಾಲಕತ್ವದಲ್ಲಿ ಪ್ರಗತಿ ಮಹಿಳಾ ಮಂಡಲ ಉಜಿರೆ ಇದರ ಸಹಕಾರದೊಂದಿಗೆ ನನ್ನ ವಿದ್ಯೆ, ನನ್ನ ಪ್ರತಿಭೆ, ನನ್ನ ಸಾಧನೆ, ನನ್ನ ಹಕ್ಕು ಎಂಬ ದ್ಯೇಯ ವಾಕ್ಯದೊಂದಿಗೆ ಆಯೋಜಿಸಿರುವ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಪ್ರಾಥಮಿಕ ಯೋಜನೆಯ ವಿದ್ಯಾರ್ಥಿ ಪ್ರತಿಭಾ ಸದಸ್ಯರ ನೋಂದಣಿ ಅಭಿಯಾನ ಮತ್ತು ರಕ್ಷಾನಿಧಿ ಕಾರ್ಯಯಾನದ ಬೆಳ್ತಂಗಡಿ ತಾಲೂಕು ವಿಭಾಗೀಯ, ಉಜಿರೆ ಗ್ರಾಮ ವ್ಯಾಪ್ತಿ
ಉದ್ಘಾಟನೆ ಮತ್ತು ದೀಪಪ್ರಜ್ವಲನೆ ಕಾರ್ಯಕ್ರಮ ಡಿ. 01ರಂದು ಪ್ರಗತಿ ಮಹಿಳಾ ಮಂಡಲ ಉಜಿರೆ ಇಲ್ಲಿ ನಡೆಯಿತು.


ಮಾತೃ ಸಮನ್ವಯ ಸಮಿತಿ, ಶಾ.ಕು. ವಿ. ಮಂಡಳಿ ಇದರ ನಿರ್ದೇಶರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಹಾಗೂ ಪ್ರಗತಿ ಮಹಿಳಾ ಮಂಡಲ ಇದರ ಸದಸ್ಯರಾದ ಶ್ರೀಮತಿ ಚೇತನಾ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.


ಶಾ.ಕು. ವಿ. ಮಂಡಳಿಯ ಸಾಂಸ್ಕೃತಿಕ ವಿಭಾಗ ನಿರ್ದೇಶಕರಾದ ಸುಧೀರ್ ಎಮ್. ಎಸ್ ಪ್ರಾಸ್ತವಿಕ ಮಾತನಾಡಿದರು.
ಮಂಡಳಿಯ ಕಾರ್ಯಾಲಯ ಪ್ರತಿನಿಧಿ ಕು. ನವ್ಯ ಮಂಡಳಿಯ ಕಾರ್ಯಯಾನ ಯೋಜನಾ ಮಾಹಿತಿ ಮಂಡಿಸಿದರು.
ನಂತರ ಮಂಡಳಿಯ ವಿದ್ಯಾರ್ಥಿ ಪ್ರತಿಭಾ ಸದಸ್ಯರು ‘ದೀಪಪ್ರಜ್ವಲನೆ’ ನಡೆಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ಪ್ರಗತಿ ಮಹಿಳಾ ಮಂಡಲದ ಸದಸ್ಯರಾದ ಶ್ರೀಮತಿ ದಿವ್ಯ ಸೂರಜ್ ಹಾಗೂ ಶಾರದಾ ಕುಟುಂಬ ವಿಕಸನ ಮಂಡಳಿಯ ಲೆಕ್ಕ ಪರಿಶೋದಕಿ ಶ್ರೀಮತಿ ಸವಿತಾ ಹಾರಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಸ್ವಾಗತಿಸಿ ವಂದಿಸಿದರು. ಶಮಂತ್. ಕೆ. ಸುಬ್ರಮಣ್ಯ ಸಹಕರಿಸಿದರು. ಮಂಡಳಿಯ ಮಾತೃ ಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya
error: Content is protected !!