23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

ಬೆಳ್ತಂಗಡಿ : ಶಾರದಾ ಕುಟುಂಬ ವಿಕಸನ ಮಂಡಳಿ, ಕೆ.ಸಿ.ಇ ಸಂಸ್ಥೆ ಪುತ್ತೂರು ಜಿಲ್ಲಾ ಮಾತೃ ಸಮನ್ವಯ ಸಮಿತಿ ದ. ಕ
ತಾಲೂಕು ಕಾರ್ಯ ನಿರ್ದೇಶಕರ ಸಂಯುಕ್ತ ಘಟಕ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಸಂಚಾಲಕತ್ವದಲ್ಲಿ ಪ್ರಗತಿ ಮಹಿಳಾ ಮಂಡಲ ಉಜಿರೆ ಇದರ ಸಹಕಾರದೊಂದಿಗೆ ನನ್ನ ವಿದ್ಯೆ, ನನ್ನ ಪ್ರತಿಭೆ, ನನ್ನ ಸಾಧನೆ, ನನ್ನ ಹಕ್ಕು ಎಂಬ ದ್ಯೇಯ ವಾಕ್ಯದೊಂದಿಗೆ ಆಯೋಜಿಸಿರುವ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಪ್ರಾಥಮಿಕ ಯೋಜನೆಯ ವಿದ್ಯಾರ್ಥಿ ಪ್ರತಿಭಾ ಸದಸ್ಯರ ನೋಂದಣಿ ಅಭಿಯಾನ ಮತ್ತು ರಕ್ಷಾನಿಧಿ ಕಾರ್ಯಯಾನದ ಬೆಳ್ತಂಗಡಿ ತಾಲೂಕು ವಿಭಾಗೀಯ, ಉಜಿರೆ ಗ್ರಾಮ ವ್ಯಾಪ್ತಿ
ಉದ್ಘಾಟನೆ ಮತ್ತು ದೀಪಪ್ರಜ್ವಲನೆ ಕಾರ್ಯಕ್ರಮ ಡಿ. 01ರಂದು ಪ್ರಗತಿ ಮಹಿಳಾ ಮಂಡಲ ಉಜಿರೆ ಇಲ್ಲಿ ನಡೆಯಿತು.


ಮಾತೃ ಸಮನ್ವಯ ಸಮಿತಿ, ಶಾ.ಕು. ವಿ. ಮಂಡಳಿ ಇದರ ನಿರ್ದೇಶರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಹಾಗೂ ಪ್ರಗತಿ ಮಹಿಳಾ ಮಂಡಲ ಇದರ ಸದಸ್ಯರಾದ ಶ್ರೀಮತಿ ಚೇತನಾ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.


ಶಾ.ಕು. ವಿ. ಮಂಡಳಿಯ ಸಾಂಸ್ಕೃತಿಕ ವಿಭಾಗ ನಿರ್ದೇಶಕರಾದ ಸುಧೀರ್ ಎಮ್. ಎಸ್ ಪ್ರಾಸ್ತವಿಕ ಮಾತನಾಡಿದರು.
ಮಂಡಳಿಯ ಕಾರ್ಯಾಲಯ ಪ್ರತಿನಿಧಿ ಕು. ನವ್ಯ ಮಂಡಳಿಯ ಕಾರ್ಯಯಾನ ಯೋಜನಾ ಮಾಹಿತಿ ಮಂಡಿಸಿದರು.
ನಂತರ ಮಂಡಳಿಯ ವಿದ್ಯಾರ್ಥಿ ಪ್ರತಿಭಾ ಸದಸ್ಯರು ‘ದೀಪಪ್ರಜ್ವಲನೆ’ ನಡೆಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ಪ್ರಗತಿ ಮಹಿಳಾ ಮಂಡಲದ ಸದಸ್ಯರಾದ ಶ್ರೀಮತಿ ದಿವ್ಯ ಸೂರಜ್ ಹಾಗೂ ಶಾರದಾ ಕುಟುಂಬ ವಿಕಸನ ಮಂಡಳಿಯ ಲೆಕ್ಕ ಪರಿಶೋದಕಿ ಶ್ರೀಮತಿ ಸವಿತಾ ಹಾರಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಸ್ವಾಗತಿಸಿ ವಂದಿಸಿದರು. ಶಮಂತ್. ಕೆ. ಸುಬ್ರಮಣ್ಯ ಸಹಕರಿಸಿದರು. ಮಂಡಳಿಯ ಮಾತೃ ಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya
error: Content is protected !!