24.5 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಪಾಲಾನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್ ಇವರ ನೇತೃತ್ವದಲ್ಲಿ ಚರ್ಚ್‌ನ ಎಲ್ಲಾ ಸಂಘಟನೆಗಳು ಹಾಗೂ ಮೈಕಲ್ ಡಿಸೋಜ ಪುತ್ತೂರು, ಸಿಒಡಿಪಿ ಹ್ಯುಮಾನಿಟಿ ಬೆಳ್ಮಣ್ ಹಾಗೂ ಊರ ಪರವೂರ ದಾನಿಗಳ ನೆರವಿನೊಂದಿಗೆ ಅಶಕ್ತ ಕುಟುಂಬಕ್ಕೆ ನಿರ್ಮಾಣಗೊಂಡ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಇದು 5 ನೇ ಯೋಜನೆಯಾಗಿದ್ದು ಇದುವರೆಗೆ ಸುಮಾರು 37 ಲಕ್ಷ ವೆಚ್ಚದಲ್ಲಿ 2021 ರಿಂದ ಇಂದಿನವರೆಗೆ ಮೂರು ಮನೆಗಳ ನವೀಕರಣ ಹಾಗೂ 2 ಹೊಸ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.
ಹಸ್ತಾಂತರ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಹ್ಯುಮಾನಿಟಿ ಟ್ರಸ್ಟ್ ಬೆಳ್ಮಣ್ ಇದರ ಸ್ಥಾಪಕ ರೋಶನ್ ಡಿಸೋಜ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾ ಕಿರಣ್ ಕಾರಂತ್ ಹಾಜರಿದ್ದು ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಅಂತೋನಿ ಚರ್ಚಿನ ಧರ್ಮ್ ಗುರು ವಂದನೀಯ ಅಬೆಲ್ ಲೋಬೋ ವಹಿಸಿದ್ದರು.
ಅನುಗ್ರಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ವಂದನೀಯ ವಿಜಯ್ ಲೋಬೋ, ದಯಾ ವಿಶೇಷ ಶಾಲೆಯ ಧರ್ಮಗುರು ವಂದನೀಯ ವಿನೋದ್ ಮಸ್ಕರೆನಸ್, ಕಾಪುಚಿನ್ ಅಶ್ರಮ ದಯಾಳ್ ಭಾಗ್ ಧರ್ಮಗುರು ವಂದನೀಯ ಎಡ್ಡಿನ್ ಲೋಬೋ, ಎಸ್.ಎಮ್.ಐ ಕಾನ್ವೆಂಟ್ ಸುಪೀರಿಯರ್ ಧರ್ಮ ಭಗಿನಿ ನ್ಯಾನ್ಸಿ ಡಯಾಸ್, ಫಲಾನುಭವಿ ರೋಜಿ ಪಾಯ್ಸ್ ಕುಟುಂಬಸ್ಥರು ಹಾಜರಿದ್ದರು.

ಪಾಲಾನಾ ಮಂಡಳಿ ಕಾರ್ಯದರ್ಶಿ ಲಿಗೋರಿ ವಾಸ್ ಸ್ವಾಗತಿಸಿದರು. ಪಾಲಾನಾ ಮಂಡಳಿ ಸಂಯೋಜಕಿ ಲವೀನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ ದನ್ಯಾವಾದವಿತ್ತರು. ಸಂತ ಲಾರೆನ್ಸ್ ವಾಳೆಯ ಗುರಿಕಾರರು ಮನೆ ಆಶೀರ್ವಚನದ ಪ್ರಾರ್ಥನೆ ಮಾಡಲು ಧರ್ಮ ಗುರುಗಳೊಂದಿಗೆ ಜತೆಗೂಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya
error: Content is protected !!