26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಪಾಲಾನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್ ಇವರ ನೇತೃತ್ವದಲ್ಲಿ ಚರ್ಚ್‌ನ ಎಲ್ಲಾ ಸಂಘಟನೆಗಳು ಹಾಗೂ ಮೈಕಲ್ ಡಿಸೋಜ ಪುತ್ತೂರು, ಸಿಒಡಿಪಿ ಹ್ಯುಮಾನಿಟಿ ಬೆಳ್ಮಣ್ ಹಾಗೂ ಊರ ಪರವೂರ ದಾನಿಗಳ ನೆರವಿನೊಂದಿಗೆ ಅಶಕ್ತ ಕುಟುಂಬಕ್ಕೆ ನಿರ್ಮಾಣಗೊಂಡ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಇದು 5 ನೇ ಯೋಜನೆಯಾಗಿದ್ದು ಇದುವರೆಗೆ ಸುಮಾರು 37 ಲಕ್ಷ ವೆಚ್ಚದಲ್ಲಿ 2021 ರಿಂದ ಇಂದಿನವರೆಗೆ ಮೂರು ಮನೆಗಳ ನವೀಕರಣ ಹಾಗೂ 2 ಹೊಸ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.
ಹಸ್ತಾಂತರ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಹ್ಯುಮಾನಿಟಿ ಟ್ರಸ್ಟ್ ಬೆಳ್ಮಣ್ ಇದರ ಸ್ಥಾಪಕ ರೋಶನ್ ಡಿಸೋಜ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾ ಕಿರಣ್ ಕಾರಂತ್ ಹಾಜರಿದ್ದು ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಅಂತೋನಿ ಚರ್ಚಿನ ಧರ್ಮ್ ಗುರು ವಂದನೀಯ ಅಬೆಲ್ ಲೋಬೋ ವಹಿಸಿದ್ದರು.
ಅನುಗ್ರಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ವಂದನೀಯ ವಿಜಯ್ ಲೋಬೋ, ದಯಾ ವಿಶೇಷ ಶಾಲೆಯ ಧರ್ಮಗುರು ವಂದನೀಯ ವಿನೋದ್ ಮಸ್ಕರೆನಸ್, ಕಾಪುಚಿನ್ ಅಶ್ರಮ ದಯಾಳ್ ಭಾಗ್ ಧರ್ಮಗುರು ವಂದನೀಯ ಎಡ್ಡಿನ್ ಲೋಬೋ, ಎಸ್.ಎಮ್.ಐ ಕಾನ್ವೆಂಟ್ ಸುಪೀರಿಯರ್ ಧರ್ಮ ಭಗಿನಿ ನ್ಯಾನ್ಸಿ ಡಯಾಸ್, ಫಲಾನುಭವಿ ರೋಜಿ ಪಾಯ್ಸ್ ಕುಟುಂಬಸ್ಥರು ಹಾಜರಿದ್ದರು.

ಪಾಲಾನಾ ಮಂಡಳಿ ಕಾರ್ಯದರ್ಶಿ ಲಿಗೋರಿ ವಾಸ್ ಸ್ವಾಗತಿಸಿದರು. ಪಾಲಾನಾ ಮಂಡಳಿ ಸಂಯೋಜಕಿ ಲವೀನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ ದನ್ಯಾವಾದವಿತ್ತರು. ಸಂತ ಲಾರೆನ್ಸ್ ವಾಳೆಯ ಗುರಿಕಾರರು ಮನೆ ಆಶೀರ್ವಚನದ ಪ್ರಾರ್ಥನೆ ಮಾಡಲು ಧರ್ಮ ಗುರುಗಳೊಂದಿಗೆ ಜತೆಗೂಡಿದರು.

Related posts

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!