July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

ಉಜಿರೆ: “ವೀರೇಂದ್ರ ಹೆಗ್ಗಡೆ ಅವರು ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕಲು ದಾರಿ ತೋರಿದ ಮಹಾಚೈತನ್ಯ” ಎಂದು ಉಜಿರೆಯ ಶ್ರೀ ರತ್ನಮಾನಸ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಕೆ. ಯತೀಶ್ ಬಣ್ಣಿಸಿದರು.

ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ.)ಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 77ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು.

“ಪೂಜ್ಯ ಖಾವಂದರು ಗ್ರಾಮೀಣ ಭಾಗದ ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಶಕ್ತಿಯನ್ನು ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಂಡ ಅನೇಕ ಕಾರ್ಯಕ್ರಮಗಳಿಂದ ಮಹಿಳೆಯರು ಆರ್ಥಿಕವಾಗಿ ಮುಂದುವರಿದಿದ್ದಾರೆ. ತಮ್ಮ ಗಂಡನ ಆರ್ಥಿಕ ಸಂಕಷ್ಟ ನಿವಾರಿಸುವಲ್ಲಿ ಬೆನ್ನೆಲುಬಾಗಿ ನಿಂತ ಪರಿಣಾಮ ಮಕ್ಕಳ ವಿದ್ಯಾಭ್ಯಾಸ ಉತ್ತಮಗೊಂಡಿದೆ” ಎಂದು ಅವರು ಹೇಳಿದರು.

ಸಂಸ್ಥೆಯ ವಿದ್ಯಾರ್ಥಿನಿಯರಾದ ಮಧುರ ಹಾಗೂ ಸೌಜನ್ಯ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಿಗೆ ಹೆಗ್ಗಡೆ ಅವರ ಕುರಿತು ಭಾಷಣ, ರಸಪ್ರಶ್ನೆ, ಭಾವಚಿತ್ರ ರಚನೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಲಾವಣ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!