September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿ.02 ರಂದು ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ ಸುಮಾರು 5ರಿಂದ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದು ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್ ಹಾಗೂ ಅಗ್ನಿಶಾಮಕದಳದವರು ರಾತ್ರಿ11ರ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ.

ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.ಇಂದು ( ಡಿ.03) 11 ಗಂಟೆಗೆ ಬೆಳಾಲು ಹಾಲು ಸೊಸೈಟಿ ಹತ್ತಿರದ ಮೈದಾನದಲ್ಲಿ ಪ್ರಸಾದ್ ಪಾರ್ಥಿವ ಶರೀರ ಇರಿಸಲಾಗಿದ್ದು ಸಾರ್ವಜನಿಕರ ದರ್ಶನಕ್ಕೆ ಮೂಲ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ ಪ್ರಸಾದ್ ಪಾರ್ಥಿವ ಶರೀರ ಸ್ಥಳಾಂತರಗೊಳ್ಳಲಿದ್ದು ಬೆಳಾಲು ಕೂಡಿಗೆ ಸ್ವ ಗೃಹಕ್ಕೆ ತರಲಾಗುವುದು .ನಂತರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನಡೆಯಲಿದೆ.

Related posts

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya
error: Content is protected !!