25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿ.02 ರಂದು ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ ಸುಮಾರು 5ರಿಂದ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದು ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್ ಹಾಗೂ ಅಗ್ನಿಶಾಮಕದಳದವರು ರಾತ್ರಿ11ರ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ.

ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.ಇಂದು ( ಡಿ.03) 11 ಗಂಟೆಗೆ ಬೆಳಾಲು ಹಾಲು ಸೊಸೈಟಿ ಹತ್ತಿರದ ಮೈದಾನದಲ್ಲಿ ಪ್ರಸಾದ್ ಪಾರ್ಥಿವ ಶರೀರ ಇರಿಸಲಾಗಿದ್ದು ಸಾರ್ವಜನಿಕರ ದರ್ಶನಕ್ಕೆ ಮೂಲ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ ಪ್ರಸಾದ್ ಪಾರ್ಥಿವ ಶರೀರ ಸ್ಥಳಾಂತರಗೊಳ್ಳಲಿದ್ದು ಬೆಳಾಲು ಕೂಡಿಗೆ ಸ್ವ ಗೃಹಕ್ಕೆ ತರಲಾಗುವುದು .ನಂತರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನಡೆಯಲಿದೆ.

Related posts

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya
error: Content is protected !!