April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

ಬೆಳ್ತಂಗಡಿ : ಶಾರದಾ ಕುಟುಂಬ ವಿಕಸನ ಮಂಡಳಿ, ಕೆ.ಸಿ.ಇ ಸಂಸ್ಥೆ ಪುತ್ತೂರು ಜಿಲ್ಲಾ ಮಾತೃ ಸಮನ್ವಯ ಸಮಿತಿ ದ. ಕ
ತಾಲೂಕು ಕಾರ್ಯ ನಿರ್ದೇಶಕರ ಸಂಯುಕ್ತ ಘಟಕ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಸಂಚಾಲಕತ್ವದಲ್ಲಿ ಪ್ರಗತಿ ಮಹಿಳಾ ಮಂಡಲ ಉಜಿರೆ ಇದರ ಸಹಕಾರದೊಂದಿಗೆ ನನ್ನ ವಿದ್ಯೆ, ನನ್ನ ಪ್ರತಿಭೆ, ನನ್ನ ಸಾಧನೆ, ನನ್ನ ಹಕ್ಕು ಎಂಬ ದ್ಯೇಯ ವಾಕ್ಯದೊಂದಿಗೆ ಆಯೋಜಿಸಿರುವ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಪ್ರಾಥಮಿಕ ಯೋಜನೆಯ ವಿದ್ಯಾರ್ಥಿ ಪ್ರತಿಭಾ ಸದಸ್ಯರ ನೋಂದಣಿ ಅಭಿಯಾನ ಮತ್ತು ರಕ್ಷಾನಿಧಿ ಕಾರ್ಯಯಾನದ ಬೆಳ್ತಂಗಡಿ ತಾಲೂಕು ವಿಭಾಗೀಯ, ಉಜಿರೆ ಗ್ರಾಮ ವ್ಯಾಪ್ತಿ
ಉದ್ಘಾಟನೆ ಮತ್ತು ದೀಪಪ್ರಜ್ವಲನೆ ಕಾರ್ಯಕ್ರಮ ಡಿ. 01ರಂದು ಪ್ರಗತಿ ಮಹಿಳಾ ಮಂಡಲ ಉಜಿರೆ ಇಲ್ಲಿ ನಡೆಯಿತು.


ಮಾತೃ ಸಮನ್ವಯ ಸಮಿತಿ, ಶಾ.ಕು. ವಿ. ಮಂಡಳಿ ಇದರ ನಿರ್ದೇಶರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಹಾಗೂ ಪ್ರಗತಿ ಮಹಿಳಾ ಮಂಡಲ ಇದರ ಸದಸ್ಯರಾದ ಶ್ರೀಮತಿ ಚೇತನಾ ಉಜಿರೆ ದೀಪ ಬೆಳಗಿಸಿ ಉದ್ಘಾಟಿಸಿದರು.


ಶಾ.ಕು. ವಿ. ಮಂಡಳಿಯ ಸಾಂಸ್ಕೃತಿಕ ವಿಭಾಗ ನಿರ್ದೇಶಕರಾದ ಸುಧೀರ್ ಎಮ್. ಎಸ್ ಪ್ರಾಸ್ತವಿಕ ಮಾತನಾಡಿದರು.
ಮಂಡಳಿಯ ಕಾರ್ಯಾಲಯ ಪ್ರತಿನಿಧಿ ಕು. ನವ್ಯ ಮಂಡಳಿಯ ಕಾರ್ಯಯಾನ ಯೋಜನಾ ಮಾಹಿತಿ ಮಂಡಿಸಿದರು.
ನಂತರ ಮಂಡಳಿಯ ವಿದ್ಯಾರ್ಥಿ ಪ್ರತಿಭಾ ಸದಸ್ಯರು ‘ದೀಪಪ್ರಜ್ವಲನೆ’ ನಡೆಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ಪ್ರಗತಿ ಮಹಿಳಾ ಮಂಡಲದ ಸದಸ್ಯರಾದ ಶ್ರೀಮತಿ ದಿವ್ಯ ಸೂರಜ್ ಹಾಗೂ ಶಾರದಾ ಕುಟುಂಬ ವಿಕಸನ ಮಂಡಳಿಯ ಲೆಕ್ಕ ಪರಿಶೋದಕಿ ಶ್ರೀಮತಿ ಸವಿತಾ ಹಾರಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಸ್ವಾಗತಿಸಿ ವಂದಿಸಿದರು. ಶಮಂತ್. ಕೆ. ಸುಬ್ರಮಣ್ಯ ಸಹಕರಿಸಿದರು. ಮಂಡಳಿಯ ಮಾತೃ ಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!