September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿ.02 ರಂದು ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ.

ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ ಸುಮಾರು 5ರಿಂದ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ಹುಡುಕಾಟ ನಡೆಸಿದ್ದು ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್ ಹಾಗೂ ಅಗ್ನಿಶಾಮಕದಳದವರು ರಾತ್ರಿ11ರ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ.

ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.ಇಂದು ( ಡಿ.03) 11 ಗಂಟೆಗೆ ಬೆಳಾಲು ಹಾಲು ಸೊಸೈಟಿ ಹತ್ತಿರದ ಮೈದಾನದಲ್ಲಿ ಪ್ರಸಾದ್ ಪಾರ್ಥಿವ ಶರೀರ ಇರಿಸಲಾಗಿದ್ದು ಸಾರ್ವಜನಿಕರ ದರ್ಶನಕ್ಕೆ ಮೂಲ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ ಪ್ರಸಾದ್ ಪಾರ್ಥಿವ ಶರೀರ ಸ್ಥಳಾಂತರಗೊಳ್ಳಲಿದ್ದು ಬೆಳಾಲು ಕೂಡಿಗೆ ಸ್ವ ಗೃಹಕ್ಕೆ ತರಲಾಗುವುದು .ನಂತರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನಡೆಯಲಿದೆ.

Related posts

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya
error: Content is protected !!