23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

ಹೊಸಂಗಡಿ: ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ತುಮರಿ ಕಲಾತಂಡದ ನೂತನ ಮಕ್ಕಳ ನಾಟಕ ‘ ‘ಇರುವೆ ಪುರಾಣ’ವು ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಇವರ ಸಹಕಾರ ಹಾಗೂ ಮಾರ್ಗದರ್ಶನದಿಂದ ಪ್ರದರ್ಶನಗೊಂಡಿತು.

ಕಿನ್ನರ ಮೇಳ ರಂಗ ತಂಡವು ಪ್ರತಿ ವರ್ಷ ವಿನೂತನ ಕಥಾವಸ್ತುವನ್ನು ಒಳಗೊಂಡ ನಾಟಕಗಳನ್ನು ರಚಿಸಿ ಪ್ರದರ್ಶಿಸುತ್ತಿದೆ. ಮಾತ್ರವಲ್ಲದೆ ಸಮಾಜಕ್ಕೆ ಉತ್ತಮ  ಮೌಲ್ಯಯುತ ಸಂದೇಶವನ್ನು ನೀಡುತ್ತಿದೆ. ‘ ಇರುವೆ ಪುರಾಣ ‘ ನಾಟಕವು ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ ಎಂಬ ಸಂದೇಶವನ್ನು ನೀಡುವ ನೂತನ ಕಲಾಕುಸುಮವಾಗಿದೆ.


ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ಮನರಂಜನೆ ಹಾಗೂ ಒಳ್ಳೆಯ ಸಂದೇಶವು ಈ ನಾಟಕದ ಮೂಲಕ ದೊರೆಯಿತು. ಶಾಲೆಯ ಚಿತ್ರಕಲಾ ಶಿಕ್ಷಕ ಸುಧೀರ್ ಬಾಳೆಪುಣಿ ನಾಟಕ ಪ್ರದರ್ಶನಕ್ಕೆ ಬೇಕಾದ ಸರ್ವ ರೀತಿಯ ಸಹಕಾರವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!