ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವು ಅನುಗ್ರಹ ಸಭಾಭವನದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ|ಫಾ| ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಡಿ.3 ರಂದು ನಡೆಯಿತು.


ಅಭ್ಯಾಗತರನ್ನು ಶಾಲಾ ಬ್ಯಾಂಡಿನ ಮೂಲಕ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದಲ್ಲಿ ಆಡಿದ ಮಕ್ಕಳನ್ನು ಗೌರವಿಸಲಾಯಿತು. ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿಯಾದ ಸತ್ಯಾರ್ಥ ಜೈನ್ ಇವರನ್ನು ವಿಶೇಷವಾಗಿ ಗೌರವಿಸಲಾಯಿತು.

ಇನ್ನೋರ್ವ ಮುಖ್ಯ ಅತಿಥಿ ಹಳೆಯ ಶಾಲೆ ವಿದ್ಯಾರ್ಥಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಶಾಲ್ಮಲಿ ಸುನಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅನುಗ್ರಹ ಶಿಕ್ಷಣ ಸಂಸ್ಥೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡುತ್ತಾ ಜೀವನದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು.

ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ಅವರು ಅನುಗ್ರಹ ಸಂಸ್ಥೆಯ ಎಲ್ಲಾ ಶೈಕ್ಷಣಿಕ ಕ್ರಿಯಾಚಟುವಟಿಕೆಗಳಿಗೆ ಸಂತಸ ವ್ಯಕ್ತಪಡಿಸಿ ಇಲ್ಲಿಯ ಕಾರ್ಯಯೋಜನೆಗಳು ಇತರ ಶಾಲೆಗಳಿಗೂ ಮಾದರಿಯಾಗಲೆಂದು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಕೋರಿದರು.

ವೇದಿಕೆಯಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

ಶಾಲಾ ಮಕ್ಕಳ ಪ್ರಾರ್ಥನೆಯ ಬಳಿಕ ಶಾಲಾ ನಾಯಕಿ ಗಾಯನ ಸ್ವಾಗತ ಭಾಷಣದ ಮೂಲಕ ಸ್ವಾಗತಿಸಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊ ಅವರು ಶಾಲಾ ವರದಿಯನ್ನು ವಾಚಿಸಿದರು. ಆಯ್ದ ಬಹುಮಾನಗಳ ವಿತರಣೆಯನ್ನು ಮುಖ್ಯ ಅತಿಥಿಯಾದ ಡಾ. ಶಾಲ್ಮಲಿ ಸುನಿಲ್ ಮಾಡಿದರು. ಶ್ರೀಮತಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿ ನಾಯಕ ಜೆರಿನ್ ಸಾಬಾಸ್ಟಿಯನ್ ಧನ್ಯವಾದವನ್ನು ಅರ್ಪಿಸಿದರು. ಅಪರಾಹ್ನ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Related posts

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya
error: Content is protected !!