23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

ಗುರುವಾಯನಕೆರೆ: ಇಲ್ಲಿಯ ಬಂಟರಭವನದ ಬಳಿಯ ವರೇಣ್ಯಂ ಬಿಲ್ಡಿಂಗ್‌ನಲ್ಲಿ ಹವಾನಿಯಂತ್ರಿತ, ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಶುದ್ಧ ಸಸ್ಯಹಾರಿ “ಹೋಟೆಲ್ ಮಥುರಾ” ಇದರ ಉದ್ಘಾಟನಾ ಸಮಾರಂಭವು ಡಿ.4ರಂದು ಆದ್ದೂರಿಯಾಗಿ ಜರುಗಿತು.


ನೂತನ ಹೋಟೆಲ್‌ನ್ನು ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ| ವೇಣುಗೋಪಾಲ ಶರ್ಮ ಅವರು ದೀಪ ಬೆಳಗಿಸಿ ಉದ್ಘಾಟಿಸಿ ನೂತನ ಸಂಸ್ಥೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ ಅವರ ಮಾತೃಶ್ರೀ ಶ್ರೀಮತಿ ನಳಿನಿ ಪೂಂಜ, ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ ಶೆಟ್ಟಿ ಭಾಗವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಟ್ಟಡದ ಮಾಲಕ ನಾರಾಯಣ ಉಪಾಧ್ಯಾಯ ಹೊನ್ನೊಟ್ಟು ಗುರುವಾಯನಕೆರೆ ಆಗಮಿಸಿ ಸಂಸ್ಥೆಗೆ ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡ, ರಾಜೇಶ್ ಶೆಟ್ಟಿ ನವಶಕ್ತಿ, ಆರ್.ಟಿ.ಒ ಚರಣ್ ಕುಮಾರ್, ಮೇಲಂತಬೆಟ್ಟು ಭಗವತಿ ಕ್ಷೇತ್ರದ ಧರ್ಮದರ್ಶಿ ಯೋಗೀಶ್ ಪೂಜಾರಿ, ಮಾಲಕ ವಸಂತ ಶೆಟ್ಟಿಯವರ ಸಹೋದರಾದ ಕೃಷ್ಣ ಶೆಟ್ಟಿ, ಸದಾಶಿವ ಶೆಟ್ಟಿ, ಸಹೋದರಿ ಶ್ರೀಮತಿ ಗುಲಾಬಿ, ಉದ್ಯಮಿ ಪ್ರಶಾಂತ್ ಕೋಟ್ಯಾನ್ ಬೆಳ್ತಂಗಡಿ, ಲಯನ್ಸ್ ಕಾರ್ಯದರ್ಶಿ ಕಿರಣ್ ಶೆಟ್ಟಿ, ನಾರಾಯಣ ಶೆಟ್ಟಿ ಹಾಗೂ ಗುರುವಾಯನಕೆರೆ ಮತ್ತು ಬೆಳ್ತಂಗಡಿ ಪೇಟೆಯ ವರ್ತಕರು, ಗಣ್ಯರು, ನಾಗರಿಕರು ಉಪಸ್ಥಿತರಿದ್ದರು.


ಆಗಮಿಸಿದ ಅತಿಥಿ-ಗಣ್ಯರನ್ನು ಹೋಟೆಲ್‌ನ ಮಾಲಕರಾದ ವಸಂತ ಶೆಟ್ಟಿ, ಶ್ರೀಮತಿ ವಿಮಲ, ಆಶ್ಲೇಷ ಶೆಟ್ಟಿ, ಕು| ಅಪೂರ್ವ ಅವರು ಸ್ವಾಗತಿಸಿ ಸತ್ಕಾರಿಸಿದರು.

Related posts

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಐ ಐ ಟಿ ಪ್ರವೇಶಕ್ಕೆ ಅರ್ಹತೆ: ರಾಷ್ಟ್ರಮಟ್ಟದಲ್ಲಿ ಧನುಷ್ ಗುತ್ತಿ 95 ನೇ ರ‍್ಯಾಂಕ್

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya
error: Content is protected !!