September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

ಗುರುವಾಯನಕೆರೆ: ಇಲ್ಲಿಯ ಬಂಟರಭವನದ ಬಳಿಯ ವರೇಣ್ಯಂ ಬಿಲ್ಡಿಂಗ್‌ನಲ್ಲಿ ಹವಾನಿಯಂತ್ರಿತ, ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಶುದ್ಧ ಸಸ್ಯಹಾರಿ “ಹೋಟೆಲ್ ಮಥುರಾ” ಇದರ ಉದ್ಘಾಟನಾ ಸಮಾರಂಭವು ಡಿ.4ರಂದು ಆದ್ದೂರಿಯಾಗಿ ಜರುಗಿತು.


ನೂತನ ಹೋಟೆಲ್‌ನ್ನು ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ ಡಾ| ವೇಣುಗೋಪಾಲ ಶರ್ಮ ಅವರು ದೀಪ ಬೆಳಗಿಸಿ ಉದ್ಘಾಟಿಸಿ ನೂತನ ಸಂಸ್ಥೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ ಅವರ ಮಾತೃಶ್ರೀ ಶ್ರೀಮತಿ ನಳಿನಿ ಪೂಂಜ, ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ ಶೆಟ್ಟಿ ಭಾಗವಹಿಸಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಟ್ಟಡದ ಮಾಲಕ ನಾರಾಯಣ ಉಪಾಧ್ಯಾಯ ಹೊನ್ನೊಟ್ಟು ಗುರುವಾಯನಕೆರೆ ಆಗಮಿಸಿ ಸಂಸ್ಥೆಗೆ ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡ, ರಾಜೇಶ್ ಶೆಟ್ಟಿ ನವಶಕ್ತಿ, ಆರ್.ಟಿ.ಒ ಚರಣ್ ಕುಮಾರ್, ಮೇಲಂತಬೆಟ್ಟು ಭಗವತಿ ಕ್ಷೇತ್ರದ ಧರ್ಮದರ್ಶಿ ಯೋಗೀಶ್ ಪೂಜಾರಿ, ಮಾಲಕ ವಸಂತ ಶೆಟ್ಟಿಯವರ ಸಹೋದರಾದ ಕೃಷ್ಣ ಶೆಟ್ಟಿ, ಸದಾಶಿವ ಶೆಟ್ಟಿ, ಸಹೋದರಿ ಶ್ರೀಮತಿ ಗುಲಾಬಿ, ಉದ್ಯಮಿ ಪ್ರಶಾಂತ್ ಕೋಟ್ಯಾನ್ ಬೆಳ್ತಂಗಡಿ, ಲಯನ್ಸ್ ಕಾರ್ಯದರ್ಶಿ ಕಿರಣ್ ಶೆಟ್ಟಿ, ನಾರಾಯಣ ಶೆಟ್ಟಿ ಹಾಗೂ ಗುರುವಾಯನಕೆರೆ ಮತ್ತು ಬೆಳ್ತಂಗಡಿ ಪೇಟೆಯ ವರ್ತಕರು, ಗಣ್ಯರು, ನಾಗರಿಕರು ಉಪಸ್ಥಿತರಿದ್ದರು.


ಆಗಮಿಸಿದ ಅತಿಥಿ-ಗಣ್ಯರನ್ನು ಹೋಟೆಲ್‌ನ ಮಾಲಕರಾದ ವಸಂತ ಶೆಟ್ಟಿ, ಶ್ರೀಮತಿ ವಿಮಲ, ಆಶ್ಲೇಷ ಶೆಟ್ಟಿ, ಕು| ಅಪೂರ್ವ ಅವರು ಸ್ವಾಗತಿಸಿ ಸತ್ಕಾರಿಸಿದರು.

Related posts

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya
error: Content is protected !!