July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

ಲಾಯಿಲ: ದಯಾ ವಿಶೇಷ ಶಾಲೆ, ವಿಮುಕ್ತಿ, ಲಾಯಿಲ ಇಲ್ಲಿ ಡಿ.04 ರಂದು ವಿಶ್ವ ಅಂಗವಿಕಲರ ದಿನಾಚರಣೆಯನ್ನು
ಆಚರಿಸಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ವಿನೋದ್‌ ಮಸ್ಕರೇನಸ್‌, ಯದುಪತಿ ಗೌಡ, ಪ್ರಾಂಶುಪಾಲರು ವಾಣಿ ಆಂಗ್ಲ ಮಾಧ್ಯಮ ಶಾಲೆ, ಶ್ರೀಮತಿ ಪ್ರಿಯಾ ಆಗ್ನೆಸ್‌, ಯೋಜನಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಬೆಳ್ತಂಗಡಿ, ವಂ.ಫಾ.ರೋಹನ್‌ ಲೋಬೋ, ಸಹ-ನಿರ್ದೇಶಕರು ಸಿ.ಕೆ.ಎಸ್.ಕೆ, ಶಾಲಾ ಮುಖ್ಯ ಶಿಕ್ಷಕಿ ದಿವ್ಯ ರವರು, ಹೈದರ್‌
ಪ್ರಾಂಶುಪಾಲರು, ಮನ್‌ಶರ್ ಪ್ಯಾರಾ ಮೆಡಿಕಲ್‌ ಕಾಲೇಜ್‌, ಗೇರುಕಟ್ಟೆ, ಶಾಲಾ ಪೋಷಕ ಪ್ರತಿನಿಧಿಯಾಗಿ
ಶುಭಕರ್‌. ಶಾಲಾ ವಿಧ್ಯಾರ್ಥಿ ಪ್ರತಿನಿಧಿಯಾಗಿ ಮಾಸ್ಟರ್‌ ಸಾಬಿತ್‌ ಉಪಸ್ಥಿತರಿದ್ದರು.


ವಂ.ಫಾ.ವಿನೋದ್‌ ಮಸ್ಕರೇನಸ್‌ ರವರು ಮಾತನಾಡಿ, ಪ್ರತಿ ಸರಕಾರಿ ಕಛೇರಿಗಳಲ್ಲಿ ಹಾಗೂ ಇನ್ನಿತರ ಸಾಮಾಜಿಕ
ವ್ಯವಸ್ಥೆಗಳಲ್ಲಿ ವಿಶೇಷ ಚೇತನ ಮಕ್ಕಳಿಗೆ ವಿವಿಧ ಉದ್ಯೋಗ ಅವಕಾಶಗಳು ಒದಗಿಸಿಕೊಡುವ ಅಗತ್ಯವಿದೆ ಹಾಗೂ ನಮ್ಮ
ಸಮಾಜದಲ್ಲಿ ವಿಶೇಷ ಚೇತನ ಮಕ್ಕಳಿಗೆ ಸಂಬಂದಿಸಿದಂತೆ ಮಗು ಸ್ನೇಹಿ ವಾತಾವರಣವನ್ನು ಬೆಳೆಸಬೇಕು ಇದರಿಂದ ಈ
ಮಕ್ಕಳಿಗೂ ಸಮಾನ ಅವಕಾಶವನ್ನು ನಾವು ನೀಡಿದಂತಾಗುವುದು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಯದುಪತಿ ಗೌಡ, ಪ್ರಾಂಶುಪಾಲರು, ವಾಣಿ ಆಂಗ್ಲ ಮಾಧ್ಯಮ ಶಾಲೆ ಇವರು ಮಾತನಾಡಿ, ವಿಶೇಷ ಚೇತನ ಮಕ್ಕಳಿಗೂ ಈ ಸಮಾಜದಲ್ಲಿ ಸಮಾನ ಸ್ಥಾನಮಾನಗಳನ್ನು ಪಡೆದು ಬದುಕುವ ಹಕ್ಕಿದೆ. ಶಾಲೆಯಲ್ಲಿ ಪ್ರತಿಯೊಬ್ಬ ಮಗುವೂ ಒಂದಲ್ಲ ಒಂದು ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಇಂತಹ ದಿವ್ಯಾಂಗ ಮಕ್ಕಳ ಸೇವೆಯನ್ನು ಮಾಡುತ್ತಿರುವ ಈ ಸಂಸ್ಥೆಯು ನಮ್ಮ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವುದು ನಮಗೆ ಹೆಮ್ಮೆಯ ವಿಚಾರ ಎಂದು ಅಭಿನಂದಿಸಿದರು.


ಶ್ರೀಮತಿ ಪ್ರಿಯಾ ಆಗ್ನೆಸ್‌, ಯೋಜನಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಬೆಳ್ತಂಗಡಿ, ಇವರು ಸಂಸ್ಥೆಗೆ
ಶುಭ ಕೋರುತ್ತಾ, ಸಮಾಜದಲ್ಲಿರುವ ನಾವೆಲ್ಲರೂ ಒಂದಾಗಿ ಈ ವಿಶೇಷ ಚೇತನ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ
ತರುವ ಕೆಲಸ ಮಾಡಬೇಕಾಗಿದೆ. ಈ ಮಕ್ಕಳಿಗೆ ಇಂದು ಸಾಧನೆ ಮಾಡಲು ಅವಕಾಶಗಳು ಬಹಳಷ್ಟು ಇವೆ. ಪೋಷಕರು ತಮ್ಮ
ಮಕ್ಕಳನ್ನು ತಮ್ಮ ಜೊತೆಯಲ್ಲಿರಿಸಿಕೊಂಡು, ಅವರ ಆರೈಕೆ ಮಾಡಿ, ಅವರಿಗೆ ತಮ್ಮ ಜೀವನ ನಿರ್ವಹಣೆಗೆ ಬೇಕಾದ ಅಗತ್ಯ
ಕೌಶಲ್ಯಗಳನ್ನೂ ಕಲಿಸಿಕೊಡಬೇಕಾಗುತ್ತದೆ. ನಮ್ಮೆಲ್ಲ ಪೋಷಕರಿಗೆ ಈ ಸಂಸ್ಥೆಯು ಒಂದು ವರದಾನವಾಗಿದೆ ಎಂದರು.

ಈ ಸಂದರ್ಭದಲ್ಲಿ ಹೈದರ್‌ ಪ್ರಾಂಶುಪಾಲರು, ಮನ್‌ಶರ್ ಪ್ಯಾರಾ ಮೆಡಿಕಲ್‌ ಕಾಲೇಜ್‌, ಗೇರುಕಟ್ಟೆ ಹಾಗೂ ಅಲ್ಲಿನ
ಶಿಕ್ಷಣಾಧಿಕಾರಿಗಳು ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಶಾಲಾ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ನೆರವೇರಿಸಿಕೊಟ್ಟರು. ಜಿಲ್ಲಾ ಮಟ್ಟದಲ್ಲಿ ನಡೆದ ಸ್ಪೆಷಲ್‌ ಒಲಿಂಪಿಕ್‌ ಕ್ರೀಡಾ ಕೂಟ ಹಾಗೂ ಶಾಲಾ ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಶಾಲಾ ಶಿಕ್ಷಕಿ ಕುಮಾರಿ ನಳಿನಾಕ್ಷಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಕುಮಾರಿ ಸ್ವಾತಿ ವಂದಿಸಿದರು.

Related posts

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಉಜಿರೆ ರುಡ್‌ಸೆಟ್‌ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya
error: Content is protected !!