32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!