30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!