July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya
error: Content is protected !!