23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವು ಅನುಗ್ರಹ ಸಭಾಭವನದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ|ಫಾ| ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಡಿ.3 ರಂದು ನಡೆಯಿತು.


ಅಭ್ಯಾಗತರನ್ನು ಶಾಲಾ ಬ್ಯಾಂಡಿನ ಮೂಲಕ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದಲ್ಲಿ ಆಡಿದ ಮಕ್ಕಳನ್ನು ಗೌರವಿಸಲಾಯಿತು. ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿಯಾದ ಸತ್ಯಾರ್ಥ ಜೈನ್ ಇವರನ್ನು ವಿಶೇಷವಾಗಿ ಗೌರವಿಸಲಾಯಿತು.

ಇನ್ನೋರ್ವ ಮುಖ್ಯ ಅತಿಥಿ ಹಳೆಯ ಶಾಲೆ ವಿದ್ಯಾರ್ಥಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಶಾಲ್ಮಲಿ ಸುನಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅನುಗ್ರಹ ಶಿಕ್ಷಣ ಸಂಸ್ಥೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡುತ್ತಾ ಜೀವನದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು.

ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ಅವರು ಅನುಗ್ರಹ ಸಂಸ್ಥೆಯ ಎಲ್ಲಾ ಶೈಕ್ಷಣಿಕ ಕ್ರಿಯಾಚಟುವಟಿಕೆಗಳಿಗೆ ಸಂತಸ ವ್ಯಕ್ತಪಡಿಸಿ ಇಲ್ಲಿಯ ಕಾರ್ಯಯೋಜನೆಗಳು ಇತರ ಶಾಲೆಗಳಿಗೂ ಮಾದರಿಯಾಗಲೆಂದು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಕೋರಿದರು.

ವೇದಿಕೆಯಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

ಶಾಲಾ ಮಕ್ಕಳ ಪ್ರಾರ್ಥನೆಯ ಬಳಿಕ ಶಾಲಾ ನಾಯಕಿ ಗಾಯನ ಸ್ವಾಗತ ಭಾಷಣದ ಮೂಲಕ ಸ್ವಾಗತಿಸಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊ ಅವರು ಶಾಲಾ ವರದಿಯನ್ನು ವಾಚಿಸಿದರು. ಆಯ್ದ ಬಹುಮಾನಗಳ ವಿತರಣೆಯನ್ನು ಮುಖ್ಯ ಅತಿಥಿಯಾದ ಡಾ. ಶಾಲ್ಮಲಿ ಸುನಿಲ್ ಮಾಡಿದರು. ಶ್ರೀಮತಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿ ನಾಯಕ ಜೆರಿನ್ ಸಾಬಾಸ್ಟಿಯನ್ ಧನ್ಯವಾದವನ್ನು ಅರ್ಪಿಸಿದರು. ಅಪರಾಹ್ನ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Related posts

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya
error: Content is protected !!