April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್ ( 35 ವರ್ಷ) ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟವುಳ್ಳವರಾಗಿರುತ್ತಾರೆ. ನ.20 ರಂದು ಬೆಳಿಗ್ಗೆ 6 ಗಂಟೆಗೆ ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಈವರೆಗೆ ಮನೆಗೆ ಬಾರದೇ ಇದ್ದು ಅವರ ದೂರವಾಣಿಗೆ ಕರೆ ಮಾಡಲಾಗಿ ಸ್ವಿಚ್ ಆಫ್ ಇದ್ದು ಅವರ ತಂದೆ-ತಾಯಿ ಮನೆಯಾದ ಈಶ್ವರಮಂಗಳಕ್ಕೆ ಪೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗದೇ ಕಾಣೆಯಾಗಿರುತ್ತಾರೆ, ಹಾಗೂ ಈ ಹಿಂದೆಯೂ ಸಹ ಮನೆಯಿಂದ ಹೋದವರು 1 ವಾರದ ನಂತರ ಮನೆಗೆ ಬರುತ್ತಿದ್ದರು ಆದ್ದರಿಂದ ಮರಳಿ ಬರುಬಹುದೆಂಬ ನಿರೀಕ್ಷೆಯಿಂದ ಇದ್ದು ಮರಳಿ ಬಾರದೇ ಇರುವುದರಿಂದ ಡಿ.4 ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ,

ಈ ಬಗ್ಗೆ, ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಬೆಳ್ತಂಗಡಿ ಪೊಲೀಸ್ ಠಾಣೆ (08256- 232093) ಅಥವಾ ದ.ಕ ಜಿಲ್ಲಾ, ಕಂಟ್ರೋಲ್ ರೂಂ(0824-2220500) ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya
error: Content is protected !!