25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್ ( 35 ವರ್ಷ) ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟವುಳ್ಳವರಾಗಿರುತ್ತಾರೆ. ನ.20 ರಂದು ಬೆಳಿಗ್ಗೆ 6 ಗಂಟೆಗೆ ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಈವರೆಗೆ ಮನೆಗೆ ಬಾರದೇ ಇದ್ದು ಅವರ ದೂರವಾಣಿಗೆ ಕರೆ ಮಾಡಲಾಗಿ ಸ್ವಿಚ್ ಆಫ್ ಇದ್ದು ಅವರ ತಂದೆ-ತಾಯಿ ಮನೆಯಾದ ಈಶ್ವರಮಂಗಳಕ್ಕೆ ಪೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗದೇ ಕಾಣೆಯಾಗಿರುತ್ತಾರೆ, ಹಾಗೂ ಈ ಹಿಂದೆಯೂ ಸಹ ಮನೆಯಿಂದ ಹೋದವರು 1 ವಾರದ ನಂತರ ಮನೆಗೆ ಬರುತ್ತಿದ್ದರು ಆದ್ದರಿಂದ ಮರಳಿ ಬರುಬಹುದೆಂಬ ನಿರೀಕ್ಷೆಯಿಂದ ಇದ್ದು ಮರಳಿ ಬಾರದೇ ಇರುವುದರಿಂದ ಡಿ.4 ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ,

ಈ ಬಗ್ಗೆ, ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಬೆಳ್ತಂಗಡಿ ಪೊಲೀಸ್ ಠಾಣೆ (08256- 232093) ಅಥವಾ ದ.ಕ ಜಿಲ್ಲಾ, ಕಂಟ್ರೋಲ್ ರೂಂ(0824-2220500) ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

Related posts

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya
error: Content is protected !!