September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್ ( 35 ವರ್ಷ) ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟವುಳ್ಳವರಾಗಿರುತ್ತಾರೆ. ನ.20 ರಂದು ಬೆಳಿಗ್ಗೆ 6 ಗಂಟೆಗೆ ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಈವರೆಗೆ ಮನೆಗೆ ಬಾರದೇ ಇದ್ದು ಅವರ ದೂರವಾಣಿಗೆ ಕರೆ ಮಾಡಲಾಗಿ ಸ್ವಿಚ್ ಆಫ್ ಇದ್ದು ಅವರ ತಂದೆ-ತಾಯಿ ಮನೆಯಾದ ಈಶ್ವರಮಂಗಳಕ್ಕೆ ಪೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗದೇ ಕಾಣೆಯಾಗಿರುತ್ತಾರೆ, ಹಾಗೂ ಈ ಹಿಂದೆಯೂ ಸಹ ಮನೆಯಿಂದ ಹೋದವರು 1 ವಾರದ ನಂತರ ಮನೆಗೆ ಬರುತ್ತಿದ್ದರು ಆದ್ದರಿಂದ ಮರಳಿ ಬರುಬಹುದೆಂಬ ನಿರೀಕ್ಷೆಯಿಂದ ಇದ್ದು ಮರಳಿ ಬಾರದೇ ಇರುವುದರಿಂದ ಡಿ.4 ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ,

ಈ ಬಗ್ಗೆ, ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಬೆಳ್ತಂಗಡಿ ಪೊಲೀಸ್ ಠಾಣೆ (08256- 232093) ಅಥವಾ ದ.ಕ ಜಿಲ್ಲಾ, ಕಂಟ್ರೋಲ್ ರೂಂ(0824-2220500) ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya
error: Content is protected !!