22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್ ( 35 ವರ್ಷ) ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟವುಳ್ಳವರಾಗಿರುತ್ತಾರೆ. ನ.20 ರಂದು ಬೆಳಿಗ್ಗೆ 6 ಗಂಟೆಗೆ ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಈವರೆಗೆ ಮನೆಗೆ ಬಾರದೇ ಇದ್ದು ಅವರ ದೂರವಾಣಿಗೆ ಕರೆ ಮಾಡಲಾಗಿ ಸ್ವಿಚ್ ಆಫ್ ಇದ್ದು ಅವರ ತಂದೆ-ತಾಯಿ ಮನೆಯಾದ ಈಶ್ವರಮಂಗಳಕ್ಕೆ ಪೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗದೇ ಕಾಣೆಯಾಗಿರುತ್ತಾರೆ, ಹಾಗೂ ಈ ಹಿಂದೆಯೂ ಸಹ ಮನೆಯಿಂದ ಹೋದವರು 1 ವಾರದ ನಂತರ ಮನೆಗೆ ಬರುತ್ತಿದ್ದರು ಆದ್ದರಿಂದ ಮರಳಿ ಬರುಬಹುದೆಂಬ ನಿರೀಕ್ಷೆಯಿಂದ ಇದ್ದು ಮರಳಿ ಬಾರದೇ ಇರುವುದರಿಂದ ಡಿ.4 ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ,

ಈ ಬಗ್ಗೆ, ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಬೆಳ್ತಂಗಡಿ ಪೊಲೀಸ್ ಠಾಣೆ (08256- 232093) ಅಥವಾ ದ.ಕ ಜಿಲ್ಲಾ, ಕಂಟ್ರೋಲ್ ರೂಂ(0824-2220500) ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

Related posts

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!