July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆಯು ಎಸ್‌.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರ ಅಧ್ಯಕ್ಷತೆಯಲ್ಲಿ ಡಿ. 2ರಂದು ನಡೆಯಿತು.

1925ರ ಜು. 8ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ ಪಡುವೆಟ್ನಾಯ ಅವರು ಪ್ರಾರಂಭಿಸಿದ ಶ್ರೀ ಜನಾರ್ದನ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ 1955 ರಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟಿತು. 2025ಕ್ಕೆ ಶಾಲೆಗೆ ನೂರು ವರ್ಷ ಪೂರ್ಣಗೊಳ್ಳಲಿದೆ. ಪ್ರಸ್ತುತ ಸಭೆಯಲ್ಲಿ, ಶತಮಾನೋತ್ಸವ ಸಮಿತಿ ರಚಿಸಿ, ಜನಾರ್ದನ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಸಭೆಯಲ್ಲಿ ಊರಿನ ಪ್ರಮುಖರು, ಹಿರಿಯ ವಿದ್ಯಾರ್ಥಿಗಳು, ಶಾಲೆಯ ನಿವೃತ್ತ ಶಿಕ್ಷಕರು, ಮತ್ತಿತರರು ಭಾಗವಹಿಸಿದ್ದರು.

Related posts

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya
error: Content is protected !!