22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya
error: Content is protected !!