ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವು ಅನುಗ್ರಹ ಸಭಾಭವನದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ|ಫಾ| ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಡಿ.3 ರಂದು ನಡೆಯಿತು.


ಅಭ್ಯಾಗತರನ್ನು ಶಾಲಾ ಬ್ಯಾಂಡಿನ ಮೂಲಕ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದಲ್ಲಿ ಆಡಿದ ಮಕ್ಕಳನ್ನು ಗೌರವಿಸಲಾಯಿತು. ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾಲಾ ವಿದ್ಯಾರ್ಥಿಯಾದ ಸತ್ಯಾರ್ಥ ಜೈನ್ ಇವರನ್ನು ವಿಶೇಷವಾಗಿ ಗೌರವಿಸಲಾಯಿತು.

ಇನ್ನೋರ್ವ ಮುಖ್ಯ ಅತಿಥಿ ಹಳೆಯ ಶಾಲೆ ವಿದ್ಯಾರ್ಥಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಶಾಲ್ಮಲಿ ಸುನಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅನುಗ್ರಹ ಶಿಕ್ಷಣ ಸಂಸ್ಥೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡುತ್ತಾ ಜೀವನದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು.

ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ಅವರು ಅನುಗ್ರಹ ಸಂಸ್ಥೆಯ ಎಲ್ಲಾ ಶೈಕ್ಷಣಿಕ ಕ್ರಿಯಾಚಟುವಟಿಕೆಗಳಿಗೆ ಸಂತಸ ವ್ಯಕ್ತಪಡಿಸಿ ಇಲ್ಲಿಯ ಕಾರ್ಯಯೋಜನೆಗಳು ಇತರ ಶಾಲೆಗಳಿಗೂ ಮಾದರಿಯಾಗಲೆಂದು ಹೇಳುತ್ತಾ ಕಾರ್ಯಕ್ರಮಕ್ಕೆ ಶುಭ ಕೋರಿದರು.

ವೇದಿಕೆಯಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

ಶಾಲಾ ಮಕ್ಕಳ ಪ್ರಾರ್ಥನೆಯ ಬಳಿಕ ಶಾಲಾ ನಾಯಕಿ ಗಾಯನ ಸ್ವಾಗತ ಭಾಷಣದ ಮೂಲಕ ಸ್ವಾಗತಿಸಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊ ಅವರು ಶಾಲಾ ವರದಿಯನ್ನು ವಾಚಿಸಿದರು. ಆಯ್ದ ಬಹುಮಾನಗಳ ವಿತರಣೆಯನ್ನು ಮುಖ್ಯ ಅತಿಥಿಯಾದ ಡಾ. ಶಾಲ್ಮಲಿ ಸುನಿಲ್ ಮಾಡಿದರು. ಶ್ರೀಮತಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿ ನಾಯಕ ಜೆರಿನ್ ಸಾಬಾಸ್ಟಿಯನ್ ಧನ್ಯವಾದವನ್ನು ಅರ್ಪಿಸಿದರು. ಅಪರಾಹ್ನ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya
error: Content is protected !!