25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆಯು ಎಸ್‌.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರ ಅಧ್ಯಕ್ಷತೆಯಲ್ಲಿ ಡಿ. 2ರಂದು ನಡೆಯಿತು.

1925ರ ಜು. 8ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ ಪಡುವೆಟ್ನಾಯ ಅವರು ಪ್ರಾರಂಭಿಸಿದ ಶ್ರೀ ಜನಾರ್ದನ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಮುಂದೆ 1955 ರಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಾಗಿ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟಿತು. 2025ಕ್ಕೆ ಶಾಲೆಗೆ ನೂರು ವರ್ಷ ಪೂರ್ಣಗೊಳ್ಳಲಿದೆ. ಪ್ರಸ್ತುತ ಸಭೆಯಲ್ಲಿ, ಶತಮಾನೋತ್ಸವ ಸಮಿತಿ ರಚಿಸಿ, ಜನಾರ್ದನ ಸ್ವಾಮಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಸಭೆಯಲ್ಲಿ ಊರಿನ ಪ್ರಮುಖರು, ಹಿರಿಯ ವಿದ್ಯಾರ್ಥಿಗಳು, ಶಾಲೆಯ ನಿವೃತ್ತ ಶಿಕ್ಷಕರು, ಮತ್ತಿತರರು ಭಾಗವಹಿಸಿದ್ದರು.

Related posts

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya
error: Content is protected !!