23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!