September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya
error: Content is protected !!