July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!