23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya
error: Content is protected !!